12:42 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಚೆನ್ನೈ; 542 ಕೋಟಿ ಅಕ್ರಮ ಹಣ ವರ್ಗಾವಣೆ; ಚೆನ್ನೈ ಉದ್ಯಮಿ ಬಂಧಿಸಿದ ಈಡಿ

05/03/2022, 17:52

ಚೆನ್ನೈ(reporterkarnataka.com): 542 ಕೋಟಿ ರೂಪಾಯಿ ಮೊತ್ತದ  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಸಿಇಪಿಎಲ್) ಪ್ರವರ್ತಕ ಅಹ್ಮದ್ ಎಆರ್ ಬುಹಾರಿ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ.

ಅಹ್ಮದ್ ಅವರು ಆಮದು ಮಾಡಿಕೊಂಡ ಕಲ್ಲಿದ್ದಲಿನ ಬೆಲೆ  ಹೆಚ್ಚಳ ಮಾಡಿ, ನಂತರ ಅದನ್ನು ಸಾರ್ವಜನಿಕ ವಲಯದ ಉದ್ಯಮಗಳಿಗೆ (ಪಿಎಸ್‌ಯು) ಪೂರೈಸಲಾಗಿದೆ ಎಂದು ಈಡಿ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಲ್ಲಿದ್ದಲನ್ನು  ಸಿಇಪಿಎಲ್  ನಿಂದ ನೇರವಾಗಿ ಅಥವಾ ಮಿನರಲ್ಸ್ ಮತ್ತು ಮೆಟಲ್ಸ್ ಟ್ರೇಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಂಎಂಟಿಸಿ) ಮೂಲಕ ಸರಬರಾಜು ಮಾಡಲ್ಪಟ್ಟಿದೆ, ಇದು ಕಡಿಮೆ ಕ್ಯಾಲೋರಿಫಿಕ್ ಮೌಲ್ಯವನ್ನು ಹೊಂದಿದೆ.

ಮಾದರಿ ಹಾಗೂ  ವಿಶ್ಲೇಷಣೆಯ (ಸಿಒಎಸ್ ಎ) ನಕಲಿ ಪ್ರಮಾಣಪತ್ರವನ್ನು ಸಲ್ಲಿಸುವ ಮೂಲಕ ಬುಹಾರಿ ಕಲ್ಲಿದ್ದಲಿನ ಗುಣಮಟ್ಟದ ಬಗ್ಗೆ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಈ ಕೆಳ ದರ್ಜೆಯ ಕಲ್ಲಿದ್ದಲಿಗೆ ಅಧಿಕ ಬೆಲೆ ನೀಡಿ ಬುಹಾರಿ 548 ಕೋಟಿ ರೂ.ಗಳನ್ನು ಗಳಿಸಿದ್ದಾರೆ. ಯುಎಇಯಲ್ಲಿನ ಸಿಇಪಿಎಲ್ ಮತ್ತು ಸಿಎನ್‌ಒ ಗ್ರೂಪ್ ಘಟಕಗಳ ಮೂಲಕ ಹಣವನ್ನು ಬೇರೆಡೆಗೆ ತಿರುಗಿಸಿದ್ದಾರೆ ಎಂದು ಈಡಿ ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು