3:50 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪ ದೋಷಿ; ವಿಶೇಷ ಕೋರ್ಟ್ ನಿಂದ 6.96 ಕೋಟಿ ರೂ. ದಂಡ

30/12/2023, 11:29

ಬೆಂಗಳೂರು(reporterkarnataka.com):ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ‌ ಸ್ಪೆಷಲ್ ಕೋರ್ಟ್ 6.96 ಕೋಟಿ ರೂ. ದಂಡ ವಿಧಿಸಿ ತೀರ್ಥ ನೀಡಿದೆ.
ಆಕಾಶ್ ಆಡಿಯೋ ಕಂಪನಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ
ಸಚಿವರು ದಂಡ ಮೊತ್ತವನ್ನು ಪಾವತಿಸಲು ವಿಫಲರಾದರೆ 6 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವುದಾಗಿ ಕೋರ್ಟ್‌ ಹೇಳಿದೆ.
ಮಧು ಬಂಗಾರಪ್ಪ ಅವರು 2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಂದರ್ಭ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರಂತೆ. ಆದರೆ ಆ ಚೆಕ್ ಬೌನ್ಸ್ ಆಗಿದ್ದರಿಂದ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ದೂರು ನೀಡಿತ್ತು. ಇದೆಲ್ಲದರ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿ 2011ರಲ್ಲಿ ಜನಪ್ರತಿನಿಧಿಗಳ ಕೋರ್ಟ್ ಮಧು ಬಂಗಾರಪ್ಪ ಅವರಿಗೆ ಜಾಮೀನು ಕೂಡ ನೀಡಿತ್ತು.
2024ರ ಜನವರಿ 30 ರೊಳಗೆ 6.10 ಕೋಟಿ ರೂ. ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದು, ಅಂದರೆ ತಾನು ಕೊಡಬೇಕಾಗಿರುವ 6.60 ಕೋಟಿ ರೂ.ನಲ್ಲಿ 50 ಲಕ್ಷ ರೂ.ವನ್ನು ಮೊದಲೇ ನೀಡಿರುವ ಹಿನ್ನೆಲೆ 6.10 ಕೋಟಿ ರೂ. ಮಾತ್ರ ನೀಡುವುದಾಗಿ ತಿಳಿಸಿದ್ದರು. ಆದರೆ, ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸದ ಹಿನ್ನೆಲೆ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ದಂಡ ಮತ್ತು ಶಿಕ್ಷೆಯ ಆದೇಶ ನೀಡಿದ್ದಾರೆ. ಹೀಗಾಗಿ, ಕೋರ್ಟ್‌ ಆದೇಶಿಸಿದ 6, 96,70000 ರೂಪಾಯಿಯಲ್ಲಿ 10 ಸಾವಿರ ರೂ.ಯನ್ನು ಕೋರ್ಟ್‌ಗೆ ದಂಡದ ರೂಪದಲ್ಲಿ ಮಧು ಬಂಗಾರಪ್ಪ ಅವರು ಪಾವತಿ ಮಾಡಬೇಕು. ದೂರುದಾರರಿಗೆ ಇನ್ನುಳಿದ ಮೊತ್ತವನ್ನು ನೀಡಲು ಕೋರ್ಟ್ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು