3:07 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಡಲ ನಗರಿ ಮಂಗಳೂರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು: ಪ್ರಜಾ ಸೌಧ ಉದ್ಘಾಟನೆ

16/05/2025, 12:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಇಂದು ನಗರಕ್ಕೆ ಆಗಮಿಸಲಿದೆ.
ಇಂದು ಮಧ್ಯಾಹ್ನ 3:20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮುಖ್ಯಮಂತ್ರಿ ಜತೆ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಗಮಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ. ನಗರದ ಕದ್ರಿ ಪಾರ್ಕ್ ನಲ್ಲಿ 3 ದಿನಗಳ ಕಾಲ ನಡೆಯಲಿರುವ ಮಾವು ಮೇಳವನ್ನು ಅವರು ಉದ್ಘಾಟಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ನಂತರ ಸಂಜೆ 4:15 ಕ್ಕೆ ಪಡೀಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ “ಪ್ರಜಾಸೌಧ” ಉದ್ಘಾಟನೆ ನರೆವೇರಿಸಲಿದ್ದಾರೆ. ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ ಅಂಗವಾಗಿ 8000 ಮಂದಿಗೆ ಆರ್.ಟಿ.ಸಿ ವಿತರಣೆ ಮಾಡಲಿದ್ದಾರೆ. ನಂತರ ಗುರುಪುರ ನಾಡಕಚೇರಿ ಉದ್ಘಾಟನೆ, ಸಣ್ಣ ನೀರಾವರಿ ಇಲಾಖೆ ಕಛೇರಿ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ, ವಿವಿಧ ಸರಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6:30ಕ್ಕೆ 5 ವರ್ಷಗಳಿಗೊಮ್ಮೆ ನಡೆಯುವ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮುಖ್ಯಮಂತ್ರಿಗಳು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು