7:01 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಕಡಲ ನಗರಿ ಮಂಗಳೂರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು: ಪ್ರಜಾ ಸೌಧ ಉದ್ಘಾಟನೆ

16/05/2025, 12:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಇಂದು ನಗರಕ್ಕೆ ಆಗಮಿಸಲಿದೆ.
ಇಂದು ಮಧ್ಯಾಹ್ನ 3:20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮುಖ್ಯಮಂತ್ರಿ ಜತೆ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಗಮಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ. ನಗರದ ಕದ್ರಿ ಪಾರ್ಕ್ ನಲ್ಲಿ 3 ದಿನಗಳ ಕಾಲ ನಡೆಯಲಿರುವ ಮಾವು ಮೇಳವನ್ನು ಅವರು ಉದ್ಘಾಟಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ನಂತರ ಸಂಜೆ 4:15 ಕ್ಕೆ ಪಡೀಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ “ಪ್ರಜಾಸೌಧ” ಉದ್ಘಾಟನೆ ನರೆವೇರಿಸಲಿದ್ದಾರೆ. ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ ಅಂಗವಾಗಿ 8000 ಮಂದಿಗೆ ಆರ್.ಟಿ.ಸಿ ವಿತರಣೆ ಮಾಡಲಿದ್ದಾರೆ. ನಂತರ ಗುರುಪುರ ನಾಡಕಚೇರಿ ಉದ್ಘಾಟನೆ, ಸಣ್ಣ ನೀರಾವರಿ ಇಲಾಖೆ ಕಛೇರಿ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ, ವಿವಿಧ ಸರಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6:30ಕ್ಕೆ 5 ವರ್ಷಗಳಿಗೊಮ್ಮೆ ನಡೆಯುವ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮುಖ್ಯಮಂತ್ರಿಗಳು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು