ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಂಗಳೂರಿಗೆ: ಸರ್ವಮತ ಸಮ್ಮೇಳನ ಶತಮಾನೋತ್ಸವದಲ್ಲಿ ಭಾಗಿ
02/12/2025, 17:58
ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು- ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 12:30 – ಪೇಸ್, ಜ್ಞಾನ ನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭ, ಮಧ್ಯಾಹ್ನ 1:15- ನಗರದ ಸಕ್ರ್ಯೂಟ್ ಹೌಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ರವರ ಭೇಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಸಂಜೆ 4:30 – ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.












