5:05 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ನಕ್ಸಲ್ ಚಟುವಟಿಕೆಗೆ ಕಡಿವಾಣ: ರಾಜ್ಯ ಗುಪ್ತವಾರ್ತೆ ನಿರ್ದೇಶಕ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

02/04/2025, 22:36

ಮಂಗಳೂರು (reporterkarnataka.com: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.
ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.
1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು