9:28 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲಾ ಕಮಲ ಪಾಳಯದಲ್ಲಿ ತೀವ್ರಗೊಂಡ ಭಿನ್ನಮತ: ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ

15/03/2024, 10:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಚಿಕ್ಕಮಗಳೂರು ಜಿಲ್ಲಾ
ಬಿಜೆಪಿಯಲ್ಲಿ ಉಂಟಾಗಿರುವ ಬಿರುಕು ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಮಂಡಲ ಅಧ್ಯಕ್ಷರ ಆಯ್ಕೆಯ ಸಂಬಂಧ ಪಕ್ಷದೊಳಗೆ ಉದ್ಭವಿಸಿರುವ ಗೊಂದಲ ಕೂಡ ಮುಂದುವರಿದಿದೆ. ಇದೀಗ ನಡೆಯಲಿರುವ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮೇಲೂ ಇದರ ಕರಿನೆರಳು ಬಿದ್ದಿದೆ.
ಮೂಡಿಗೆರೆ ಬಿಜೆಪಿ ಕಛೇರಿಯಲ್ಲಿ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿದೆ. ಈ ಸಮಾರಂಭಕ್ಕೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಭರ್ಜರಿ ತಯಾರಿಯನ್ನು ನಡೆಸಲಾಗಿದೆ. ಮಂಡಲ ಅಧ್ಯಕ್ಷರಾಗಿ ಟಿ.ಎಂ. ಗಜೇಂದ್ರ ಮತ್ತು ಅವರ ತಂಡದ ಸದಸ್ಯರು ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಇತ್ತ ಮಂಡಲ ಅಧ್ಯಕ್ಷರ ಆಯ್ಕೆಯ ವಿಚಾರವಾಗಿ ಮೂಡಿಗೆರೆ ತಾಪಂ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿತರಾಗಿರುವ ಬಣಕಲ್ ಹೋಬಳಿ ಬಿಜೆಪಿ ಅಧ್ಯಕ್ಷ ಪಿ.ಜಿ. ಅನುಕುಮಾರ್ ಪಟ್ಟದೂರು ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರುಗಳ ನೇತೃತ್ವದಲ್ಲಿ ಮೂಡಿಗೆರೆ ಪ್ರೀತಂ ಹಾಲ್ ನಲ್ಲಿ ಬಿಜೆಪಿ ಚಿಹ್ನೆಯಡಿಯೇ “ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾದ ಪ್ರಚಾರವನ್ನು ನೀಡಲಾಗುತ್ತಿದೆ. ಪಿ.ಜಿ. ಅನುಕುಮಾರ್ ಅವರು ಕೆ.ಸಿ. ರತನ್ ಅವರನ್ನು ಕುರಿತು ಮಾತನಾಡಿರುವ ಆಡಿಯೋ ಒಂದು ಸಹ ವ್ಯಾಪಕವಾಗಿ ಹರಿದಾಡುತ್ತಿದೆ. ನಾಳಿನ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದ ಹೆಸರಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೂ ಪಕ್ಷದ ಒಂದು ಗುಂಪು ಸಾಕಷ್ಟು ತಯಾರಿ ನಡೆಸಿದ್ದು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಪಕ್ಷದೊಳಗೆ ನಡೆಯುತ್ತಿರುವ ಈ ಘಟನಾವಳಿಗಳು ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಗೊಂದಲ ಮೂಡಿಸಿದೆ. ಯಾವ ಕಾರ್ಯಕ್ರಮಕ್ಕೆ ಹೋಗುವುದು ? ಎಂಬ ಇಕ್ಕಟ್ಟಿನಲ್ಲಿ ಕಾರ್ಯಕರ್ತರು ಸಿಲುಕಿರುವುದು ಅವರ ಭಾವನೆಗಳಿಂದ ತಿಳಿದುಬರುತ್ತಿದೆ. ಅತ್ತ ಹೋದರೆ ಇವರಿಗೆ ಸಿಟ್ಟು, ಇತ್ತ ಹೋದರೆ ಅವರಿಗೆ ಸಿಟ್ಟು ಎಂಬ ರೀತಿಯಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಏರ್ಪಟ್ಟಿದೆ.
ಒಟ್ಟಾರೆ ನಾಳೆ ಮೂಡಿಗೆರೆ ಬಿಜೆಪಿಯೊಳಗೆ ಎರಡು ಬಣಗಳು ಪರಸ್ಪರರು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು ಮತ್ತೊಂದು ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು