4:12 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು