6:41 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು