2:42 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಜಾನ್ ಗೆ ಪ್ರತಿಯಾಗಿ ದೇಗುಲಗಳಲ್ಲಿ ಮೊಳಗಿದ ಸುಪ್ರಭಾತ

09/05/2022, 21:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಆರಂಭವಾಗಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ 5.15ಕ್ಕೆ ಮುಸ್ಲಿಮರು ಆಜಾನ್ ಮೊಳಗುವ ವೇಳೆ ಹಿಂದೂಗಳ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗಿದೆ.


ಚಿಕ್ಕಮಗಳೂರು ನಗರದ ಶಂಕರಪುರ ಏರಿಯಾದಲ್ಲಿರುವ ಕೊಂಗಮಾಟಮ್ಮ ದೇವಾಲಯದಲ್ಲಿ ಸುಪ್ರಭಾತ ಮೊಳಗಿದೆ. ಕಳೆದ ರಾತ್ರಿಯೇ ದೇವಾಲಯದ ಮೇಲ್ಭಾಗ ಮೈಕ್ ಕಟ್ಟಿ ಎಲ್ಲಾ ಸಿದ್ಧತೆ ನಡೆಸಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗ್ಗೆ 5.15ಕ್ಕೆ  ಸುಪ್ರಭಾತ ಹಾಕಿದ್ದಾರೆ. ಕೋಟೆ ವೀರಭದ್ರಸ್ವಾಮಿ ದೇವಸ್ಥಾನ, ಕಲ್ದೊಡ್ಡಿ ಶಿವನ ದೇವಸ್ಥಾನ, ವಿಜಯಪುರ ಆಂಜನೇಯ ಸ್ವಾಮಿ ದೇವಸ್ಥಾನ, ನೇಕಾರ ಬೀದಿ ಶ್ರೀರಾಮನ ದೇವಸ್ಥಾನ, ಅಗಸರ ಬೀದಿ ಬನಶಂಕರಿ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗುತ್ತಿದೆ. ಸುಪ್ರಭಾತ ಜೊತೆ ಶ್ರೀರಾಮನ ಭಕ್ತಿ ಗೀತೆ ” ನಿನ್ನೆಗಳ ಪಾಪವ ಸೊನ್ನೆಯಾಗಿಸೋ ರಾಮ” ಎಂಬ ಭಕ್ತಿ ಗೀತೆಯೂ ಮೊಳಗಿದೆ. ಇನ್ನು ಮುಂದೆ ದಿನಕ್ಕೆ ಮೂರು ಬಾರಿ ದೇವಾಲಯಗಳಲ್ಲಿ ಸುಪ್ರಭಾತ ಹಾಕಲು ಶ್ರೀರಾಮಸೇನೆ ಕಾರ್ಯಕರ್ತರು ತೀರ್ಮಾನಿಸಿ ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ. ಮುಸ್ಲಿಮರು ನಮಾಜ್ ಕೂಗುವ ವೇಳೆ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ಸುಪ್ರಭಾತ ಹಾಕಲು ತೀರ್ಮಾನಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು