4:51 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಜಾನ್ ಗೆ ಪ್ರತಿಯಾಗಿ ದೇಗುಲಗಳಲ್ಲಿ ಮೊಳಗಿದ ಸುಪ್ರಭಾತ

09/05/2022, 21:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಆರಂಭವಾಗಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ 5.15ಕ್ಕೆ ಮುಸ್ಲಿಮರು ಆಜಾನ್ ಮೊಳಗುವ ವೇಳೆ ಹಿಂದೂಗಳ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗಿದೆ.


ಚಿಕ್ಕಮಗಳೂರು ನಗರದ ಶಂಕರಪುರ ಏರಿಯಾದಲ್ಲಿರುವ ಕೊಂಗಮಾಟಮ್ಮ ದೇವಾಲಯದಲ್ಲಿ ಸುಪ್ರಭಾತ ಮೊಳಗಿದೆ. ಕಳೆದ ರಾತ್ರಿಯೇ ದೇವಾಲಯದ ಮೇಲ್ಭಾಗ ಮೈಕ್ ಕಟ್ಟಿ ಎಲ್ಲಾ ಸಿದ್ಧತೆ ನಡೆಸಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗ್ಗೆ 5.15ಕ್ಕೆ  ಸುಪ್ರಭಾತ ಹಾಕಿದ್ದಾರೆ. ಕೋಟೆ ವೀರಭದ್ರಸ್ವಾಮಿ ದೇವಸ್ಥಾನ, ಕಲ್ದೊಡ್ಡಿ ಶಿವನ ದೇವಸ್ಥಾನ, ವಿಜಯಪುರ ಆಂಜನೇಯ ಸ್ವಾಮಿ ದೇವಸ್ಥಾನ, ನೇಕಾರ ಬೀದಿ ಶ್ರೀರಾಮನ ದೇವಸ್ಥಾನ, ಅಗಸರ ಬೀದಿ ಬನಶಂಕರಿ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗುತ್ತಿದೆ. ಸುಪ್ರಭಾತ ಜೊತೆ ಶ್ರೀರಾಮನ ಭಕ್ತಿ ಗೀತೆ ” ನಿನ್ನೆಗಳ ಪಾಪವ ಸೊನ್ನೆಯಾಗಿಸೋ ರಾಮ” ಎಂಬ ಭಕ್ತಿ ಗೀತೆಯೂ ಮೊಳಗಿದೆ. ಇನ್ನು ಮುಂದೆ ದಿನಕ್ಕೆ ಮೂರು ಬಾರಿ ದೇವಾಲಯಗಳಲ್ಲಿ ಸುಪ್ರಭಾತ ಹಾಕಲು ಶ್ರೀರಾಮಸೇನೆ ಕಾರ್ಯಕರ್ತರು ತೀರ್ಮಾನಿಸಿ ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ. ಮುಸ್ಲಿಮರು ನಮಾಜ್ ಕೂಗುವ ವೇಳೆ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ಸುಪ್ರಭಾತ ಹಾಕಲು ತೀರ್ಮಾನಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು