8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಜಾನ್ ಗೆ ಪ್ರತಿಯಾಗಿ ದೇಗುಲಗಳಲ್ಲಿ ಮೊಳಗಿದ ಸುಪ್ರಭಾತ

09/05/2022, 21:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಆರಂಭವಾಗಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ 5.15ಕ್ಕೆ ಮುಸ್ಲಿಮರು ಆಜಾನ್ ಮೊಳಗುವ ವೇಳೆ ಹಿಂದೂಗಳ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗಿದೆ.


ಚಿಕ್ಕಮಗಳೂರು ನಗರದ ಶಂಕರಪುರ ಏರಿಯಾದಲ್ಲಿರುವ ಕೊಂಗಮಾಟಮ್ಮ ದೇವಾಲಯದಲ್ಲಿ ಸುಪ್ರಭಾತ ಮೊಳಗಿದೆ. ಕಳೆದ ರಾತ್ರಿಯೇ ದೇವಾಲಯದ ಮೇಲ್ಭಾಗ ಮೈಕ್ ಕಟ್ಟಿ ಎಲ್ಲಾ ಸಿದ್ಧತೆ ನಡೆಸಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗ್ಗೆ 5.15ಕ್ಕೆ  ಸುಪ್ರಭಾತ ಹಾಕಿದ್ದಾರೆ. ಕೋಟೆ ವೀರಭದ್ರಸ್ವಾಮಿ ದೇವಸ್ಥಾನ, ಕಲ್ದೊಡ್ಡಿ ಶಿವನ ದೇವಸ್ಥಾನ, ವಿಜಯಪುರ ಆಂಜನೇಯ ಸ್ವಾಮಿ ದೇವಸ್ಥಾನ, ನೇಕಾರ ಬೀದಿ ಶ್ರೀರಾಮನ ದೇವಸ್ಥಾನ, ಅಗಸರ ಬೀದಿ ಬನಶಂಕರಿ ದೇವಸ್ಥಾನದಲ್ಲಿ ಸುಪ್ರಭಾತ ಮೊಳಗುತ್ತಿದೆ. ಸುಪ್ರಭಾತ ಜೊತೆ ಶ್ರೀರಾಮನ ಭಕ್ತಿ ಗೀತೆ ” ನಿನ್ನೆಗಳ ಪಾಪವ ಸೊನ್ನೆಯಾಗಿಸೋ ರಾಮ” ಎಂಬ ಭಕ್ತಿ ಗೀತೆಯೂ ಮೊಳಗಿದೆ. ಇನ್ನು ಮುಂದೆ ದಿನಕ್ಕೆ ಮೂರು ಬಾರಿ ದೇವಾಲಯಗಳಲ್ಲಿ ಸುಪ್ರಭಾತ ಹಾಕಲು ಶ್ರೀರಾಮಸೇನೆ ಕಾರ್ಯಕರ್ತರು ತೀರ್ಮಾನಿಸಿ ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ. ಮುಸ್ಲಿಮರು ನಮಾಜ್ ಕೂಗುವ ವೇಳೆ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಹೊತ್ತು ಸುಪ್ರಭಾತ ಹಾಕಲು ತೀರ್ಮಾನಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು