11:54 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು