5:30 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು