6:06 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ?

23/01/2022, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ(70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರವನ್ನು ನೆರವೇರಿಸಲು ಶನಿವಾರ ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ  ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.  


ಈ ಬಗ್ಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಸದಸ್ಯರಾದ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.


ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಇಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಗ್ರಾಮಸ್ಥರು ಅನಾರೋಗ್ಯಪೀಡಿತರಾದರೆ, ಸಾವನ್ನಪ್ಪಿದರೆ ತೆಪ್ಪವನ್ನೇ ಆಶ್ರಯಿಸಬೇಕಾಗಿದೆ. ಜನಪ್ರತಿನಿಧಿಗಳು ಈ ಕುರಿತು ಯೋಚಿಸಬೇಕಾಗಿದೆ. ಸಿ.ಟಿ. ರವಿ ಅವರು ಇಲ್ಲಿ ದೀರ್ಘಕಾಲ ಉಸ್ತುವಾರಿ ಸಚಿವರಾಗಿದ್ದವರು. ಹಾಗೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಸಂಸದರಾಗಿ ಇದೀಗ ಕೇಂದ್ರ ಸಚಿವೆಯಾದವರು. ಅಧಿಕಾರಸ್ಥರು ಈ ಕುರಿತು ಮಗದೊಮ್ಮೆ ಯೋಚಿಸಬೇಕಾಗಿದೆ ಎಂದು ಚಿಕ್ಕಮಗಳೂರಿನ ಪ್ರಜ್ಞಾವಂತರು ಅಭಿಪ್ರಾಯಪಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು