3:38 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ?

23/01/2022, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ(70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರವನ್ನು ನೆರವೇರಿಸಲು ಶನಿವಾರ ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ  ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.  


ಈ ಬಗ್ಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಸದಸ್ಯರಾದ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.


ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಇಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಗ್ರಾಮಸ್ಥರು ಅನಾರೋಗ್ಯಪೀಡಿತರಾದರೆ, ಸಾವನ್ನಪ್ಪಿದರೆ ತೆಪ್ಪವನ್ನೇ ಆಶ್ರಯಿಸಬೇಕಾಗಿದೆ. ಜನಪ್ರತಿನಿಧಿಗಳು ಈ ಕುರಿತು ಯೋಚಿಸಬೇಕಾಗಿದೆ. ಸಿ.ಟಿ. ರವಿ ಅವರು ಇಲ್ಲಿ ದೀರ್ಘಕಾಲ ಉಸ್ತುವಾರಿ ಸಚಿವರಾಗಿದ್ದವರು. ಹಾಗೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಸಂಸದರಾಗಿ ಇದೀಗ ಕೇಂದ್ರ ಸಚಿವೆಯಾದವರು. ಅಧಿಕಾರಸ್ಥರು ಈ ಕುರಿತು ಮಗದೊಮ್ಮೆ ಯೋಚಿಸಬೇಕಾಗಿದೆ ಎಂದು ಚಿಕ್ಕಮಗಳೂರಿನ ಪ್ರಜ್ಞಾವಂತರು ಅಭಿಪ್ರಾಯಪಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು