2:03 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ?

23/01/2022, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ(70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರವನ್ನು ನೆರವೇರಿಸಲು ಶನಿವಾರ ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ  ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.  


ಈ ಬಗ್ಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಸದಸ್ಯರಾದ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.


ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಇಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಗ್ರಾಮಸ್ಥರು ಅನಾರೋಗ್ಯಪೀಡಿತರಾದರೆ, ಸಾವನ್ನಪ್ಪಿದರೆ ತೆಪ್ಪವನ್ನೇ ಆಶ್ರಯಿಸಬೇಕಾಗಿದೆ. ಜನಪ್ರತಿನಿಧಿಗಳು ಈ ಕುರಿತು ಯೋಚಿಸಬೇಕಾಗಿದೆ. ಸಿ.ಟಿ. ರವಿ ಅವರು ಇಲ್ಲಿ ದೀರ್ಘಕಾಲ ಉಸ್ತುವಾರಿ ಸಚಿವರಾಗಿದ್ದವರು. ಹಾಗೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಸಂಸದರಾಗಿ ಇದೀಗ ಕೇಂದ್ರ ಸಚಿವೆಯಾದವರು. ಅಧಿಕಾರಸ್ಥರು ಈ ಕುರಿತು ಮಗದೊಮ್ಮೆ ಯೋಚಿಸಬೇಕಾಗಿದೆ ಎಂದು ಚಿಕ್ಕಮಗಳೂರಿನ ಪ್ರಜ್ಞಾವಂತರು ಅಭಿಪ್ರಾಯಪಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು