9:53 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು