ಇತ್ತೀಚಿನ ಸುದ್ದಿ
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ
19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.