12:25 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು