12:56 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು