11:56 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು