4:55 AM Thursday19 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು