9:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು