4:50 AM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು