1:21 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು