8:41 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು