12:28 AM Saturday21 - June 2025
ಬ್ರೇಕಿಂಗ್ ನ್ಯೂಸ್
Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

Chikkamagaluru | ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಚಿವ ಕೆ.ಜೆ.ಜಾರ್ಜ್ ಹಸ್ತಾಂತರ

22/06/2025, 00:04

- *ಮೃತ ಅನಿಲ್ ಪಾಯ್ಸ್ ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ*

- *ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ*

ಚಿಕ್ಕಮಗಳೂರು(reporterkarnataka.com): ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ಪಾಯ್ಸ್ ಅವರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು 5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು.
ಮಳೆ ಅನಾಹುತ ಸಂಭವಿಸಿದ ಖಾಂಡ್ಯ ಹೋಬಳ ಬಿಳುಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವರು ಬಳಿಕ ಪರಿಹಾರದ ಚೆಕ್ ಅನ್ನು ವಿತರಿಸಿದರು. ಬಳಿಕಮಾತನಾಡಿ ಹಣದಿಂದ ಕಾರಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯತೆಯಿದ ಪರಿಹಾರ ವಿತರಿಸಲಾಗುತ್ತಿದ್ದು, ಮೃತರ ಕುಟುಂಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲವಾಗಬೇಕಿದೆ ಎಂದರು.
ಪ್ರಸ್ತುತ ಜಿಲ್ಲಾಧಿಕಾರಿಗಳ ಕಡೆಯಿಂದ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮೃತ ಅನಿಲ್ ಪಾಯ್ಸ್ ಅವರ ಮನೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಈ ಹಿಂದೆ ಮನೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಂದ ಹಣ ನೀಡಲಾಗಿತ್ತು. ಇದೀಗ ಮನೆಯನ್ನು ಶಾಸಕ ರಾಜೇಗೌಡರು ಸ್ವಂತ ಹಣದಿಂದ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.
ಅನಿಲ್ ಪಾಯ್ಸ್ ಅವರಿಗೆ ಇಬ್ಬರು ಮಕ್ಕಳಿದ್ದು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಇಬ್ಬರಿಗೂ ಮುಂದಿನ ವಿದ್ಯಾಭ್ಯಾಸಕ್ಕೆ ಸೂಕ್ತ ಅನುಕೂಲ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.
ಅಲ್ಲದೆ, ಕೊಪ್ಪ ತಾಲ್ಲೂಕಿನ ಮೇಗೂರು ಹೊಸತೋಟ ಬಳಿಯಲ್ಲಿ ಇತ್ತೀಚೆಗೆ ಆಟೋ ಮೇಲೆ ಮರ ಬಿದ್ದು ಚಾಲಕ ರತ್ನಾಕರ್ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೂ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಾಗುವುದು ಎಂದರು.

*ಅಪಾಯಕಾರಿ ಮರಗಳ ತೆರವಿಗೆ ಸೂಚನೆ*:
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಮಲೆನಾಡು ಭಾಗದಲ್ಲಿ ಅಧಿಕ ಗಾಳಿ, ಮಳೆ ಸಂದರ್ಭದಲ್ಲಿ ಅಪಾಯಕಾರಿ ಮರಗಳು ಬಿದ್ದು ಪ್ರಾಣ ಹಾನಿಯಾಗುತ್ತಿವೆ. ಹಾಗಾಗಿ ರಸ್ತೆ ಬದಿ ಅಪಾಯಕಾರಿ ಮರಗಳು ಇದ್ದಲ್ಲಿ ಅವುಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಬಿ.ಕೆ.ಸುದರ್ಶನ್, ತಹಸೀಲ್ದಾರ್ ರೇಶ್ಮಾ ಶೆಟ್ಟಿ, ಖಾಂಡ್ಯ ಹೋಬಳಿ ರಾಜಸ್ವ ನಿರೀಕ್ಷಕ ಎಸ್.ಆರ್.ವಿನಯ್, ಗ್ರಾಮ ಆಡಳಿತ ಅಧಿಕಾರಿ ಕೆ.ಆರ್.ಸೌಧ, ಮುಖಂಡರಾದ ಪ್ರಶಾಂತ್ ಎಲ್.ಶೆಟ್ಟಿ, ಬಿ.ಸಿ.ಮಂಜುನಾಥ್, ಕಾಫಿ ಗಿರೀಶ್, ಮಹಮ್ಮದ್ ಹನೀಫ್, ಆಶಾ ನಾರಾಯಣಗೌಡ, ಬಿ.ಕೆ.ಮಧುಸೂದನ್, ಕೆ.ಎಸ್.ಗಣೇಶ್, ಚಂದ್ರಶೇಖರ್ ರೈ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು