11:58 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಅಜ್ಜಂಪುರ: ಬೋನಿನ ಬಾಗಿಲು ತೆರೆಯಲು ಯತ್ನಿಸಿದ ಬೇಜವಾಬ್ದಾರಿ ಅಧಿಕಾರಿ: ದಾಳಿಗೆ ಮುಂದಾದ ಚಿರತೆ

16/08/2025, 18:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದಾಗ ಚಿರತೆ
ದಾಳಿಗೆ ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.


ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ-ಭಯ ಹುಟ್ಟಿಸಿತ್ತು. ಸ್ಥಳಿಯರು ಹೊಲ-ಹದ್ದೆ-ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಲು ಭಯಪಡುತ್ತಿದ್ದರು.


ಹಾಗಾಗಿ ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಎಂಬುವರ ಮನೆ ಬಳಿ ಬೋನಿಟ್ಟಿದ್ದರು. ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಆದರೆ, ಇಂದು ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನ ಅರ್ಧ ತೆಗೆದು ಹುಚ್ಚಾಟ ಮೆರೆದಿದ್ದಾರೆ. ಚಿರತೆ ಭಯವಾಗಿ ದಾಳಿಗೆ ಯತ್ನಿಸಿದಾಗ ತಕ್ಷಣ ಬಾಗಿಲು ಹಾಕಿದ್ದಾರೆ. ಅಧಿಕಾರಿಗಳ ಈ ಹುಚ್ಚಾಟದ ವಿಡಿಯೋ ಸ್ಥಳಿಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಪಾಯಕಾರಿ ಪ್ರಾಣಿಯ ಜೊತೆ ಈ ರೀತಿ ಹುಚ್ಚಾಟ ಆಡುವ ಅಧಿಕಾರಿಗಳ ವಿರುದ್ಧ ಸ್ಥಳಿಯರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು