2:50 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

Chikkamagaluru | ಅಜ್ಜಂಪುರ: ಬೋನಿನ ಬಾಗಿಲು ತೆರೆಯಲು ಯತ್ನಿಸಿದ ಬೇಜವಾಬ್ದಾರಿ ಅಧಿಕಾರಿ: ದಾಳಿಗೆ ಮುಂದಾದ ಚಿರತೆ

16/08/2025, 18:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದಾಗ ಚಿರತೆ
ದಾಳಿಗೆ ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.


ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ-ಭಯ ಹುಟ್ಟಿಸಿತ್ತು. ಸ್ಥಳಿಯರು ಹೊಲ-ಹದ್ದೆ-ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಲು ಭಯಪಡುತ್ತಿದ್ದರು.


ಹಾಗಾಗಿ ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಎಂಬುವರ ಮನೆ ಬಳಿ ಬೋನಿಟ್ಟಿದ್ದರು. ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಆದರೆ, ಇಂದು ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನ ಅರ್ಧ ತೆಗೆದು ಹುಚ್ಚಾಟ ಮೆರೆದಿದ್ದಾರೆ. ಚಿರತೆ ಭಯವಾಗಿ ದಾಳಿಗೆ ಯತ್ನಿಸಿದಾಗ ತಕ್ಷಣ ಬಾಗಿಲು ಹಾಕಿದ್ದಾರೆ. ಅಧಿಕಾರಿಗಳ ಈ ಹುಚ್ಚಾಟದ ವಿಡಿಯೋ ಸ್ಥಳಿಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಪಾಯಕಾರಿ ಪ್ರಾಣಿಯ ಜೊತೆ ಈ ರೀತಿ ಹುಚ್ಚಾಟ ಆಡುವ ಅಧಿಕಾರಿಗಳ ವಿರುದ್ಧ ಸ್ಥಳಿಯರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯನಿರ್ವಹಣೆಯ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು