7:53 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮತ್ತೊಂದು ಮಂಗನಕಾಯಿಲೆ ಪ್ರಕರಣ ಪತ್ತೆ; ಕೊಪ್ಪ ಸರಕಾರಿ ಆಸ್ಪತ್ರೆಗೆ ದಾಖಲು

06/01/2026, 16:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದೆ.
30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ.
ಎನ್‌.ಆರ್‌.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಸೋಂಕು ಕಂಡುಬಂದಿದ್ದು,ಯುವಕನಿಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯ ಕೆಎಫ್‌ಡಿ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೆ ಜಿಲ್ಲೆಯಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ದೃಢವಾಗಿದೆ.
ಇನ್ನೊಬ್ಬ ರೋಗಿ ಬೇರೆ ಅನಾರೋಗ್ಯದ ಕಾರಣದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಎಫ್‌ಡಿ ಪ್ರಕರಣ ದೃಢವಾದ ಹಿನ್ನೆಲೆ,ಕಟ್ಟಿನಮನೆ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಸ್ಥರಿಗೆ ಗ್ರಾಮದ ಶುಚಿತ್ವ ಕಾಪಾಡಿಕೊಳ್ಳುವಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿಯೇ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು