6:40 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆಗೆ

14/10/2025, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇದೇ ಭಾನುವಾರ- ಸೋಮವಾರ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಭಕ್ತ ಸಾಗರ 5 ಕಿ.ಮೀ. ಬೆಟ್ಟ ಏರಲಿರುವ ಕಾರಣ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರತಿ ವರ್ಷ 60-70 ಸಾವಿರಕ್ಕೂ ಹೆಚ್ಚು ಭಕ್ತರು ದೇವೀರಮ್ಮನ ದರ್ಶನಕ್ಕೆ ಬೆಟ್ಟ ಹತ್ತುತ್ತಾರೆ.
15 ವರ್ಷ ಮೇಲ್ಪಟ್ಟು 60 ವರ್ಷ ಒಳಗಿನವರು ಮಾತ್ರ ಬೆಟ್ಟ ಹತ್ತಬೇಕು. ಪ್ರವಾಸಿ ತಾಣ ಹಾಗೂ ಭಕ್ತರ ನಡುವೆ ಜನಸಂದಣಿ ತಡೆಗೆ ಜಿಲ್ಲಾಡಳಿತ ಕ್ರಮಕೈಗೊಂಡಿದೆ.
19ರ ಬೆಳಗ್ಗೆ 6 ಗಂಟೆಯಿಂದ 20ರ ಸಂಜೆ 6 ಗಂಟೆವರೆಗೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ದತ್ತಪೀಠ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ‌.
ಹೋಂ ಸ್ಟೇ, ರೆಸಾರ್ಟ್ ಬುಕ್ ಮಾಡಿರುವವರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
ರಾಜ್ಯ ಹೆದ್ದಾರಿ ತರೀಕೆರೆ ಮಾರ್ಗವನ್ನ ಬಿಂಡಿಗ ದೇವೀರಮ್ಮನ ಭಕ್ತರಿಗೆ ಮೀಸಲಿಡಲಾಗಿದೆ.
ಅನ್ಯ ಕಾರ್ಯದ ನಿಮಿತ್ತ ಚಿಕ್ಕಮಗಳೂರಿಗೆ ಬರುವವರು ಕಡ್ಡಾಯವಾಗಿ ಕಡೂರು ಮಾರ್ಗದಲ್ಲಿ ಬರುವಂತೆ ಸೂಚನೆ ನೀಡಲಾಗಿದೆ.
ಭಕ್ತರಿಗೆ ವರ್ಷಕ್ಕೊಮ್ಮೆ ದರ್ಶನ ನೀಡುವ ಬೆಟ್ಟದ ಮೇಲಿರೋ ಬಿಂಡಿಗ ದೇವೀರಮ್ಮ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು