12:06 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆಗೆ

14/10/2025, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇದೇ ಭಾನುವಾರ- ಸೋಮವಾರ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಭಕ್ತ ಸಾಗರ 5 ಕಿ.ಮೀ. ಬೆಟ್ಟ ಏರಲಿರುವ ಕಾರಣ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರತಿ ವರ್ಷ 60-70 ಸಾವಿರಕ್ಕೂ ಹೆಚ್ಚು ಭಕ್ತರು ದೇವೀರಮ್ಮನ ದರ್ಶನಕ್ಕೆ ಬೆಟ್ಟ ಹತ್ತುತ್ತಾರೆ.
15 ವರ್ಷ ಮೇಲ್ಪಟ್ಟು 60 ವರ್ಷ ಒಳಗಿನವರು ಮಾತ್ರ ಬೆಟ್ಟ ಹತ್ತಬೇಕು. ಪ್ರವಾಸಿ ತಾಣ ಹಾಗೂ ಭಕ್ತರ ನಡುವೆ ಜನಸಂದಣಿ ತಡೆಗೆ ಜಿಲ್ಲಾಡಳಿತ ಕ್ರಮಕೈಗೊಂಡಿದೆ.
19ರ ಬೆಳಗ್ಗೆ 6 ಗಂಟೆಯಿಂದ 20ರ ಸಂಜೆ 6 ಗಂಟೆವರೆಗೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ದತ್ತಪೀಠ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ‌.
ಹೋಂ ಸ್ಟೇ, ರೆಸಾರ್ಟ್ ಬುಕ್ ಮಾಡಿರುವವರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
ರಾಜ್ಯ ಹೆದ್ದಾರಿ ತರೀಕೆರೆ ಮಾರ್ಗವನ್ನ ಬಿಂಡಿಗ ದೇವೀರಮ್ಮನ ಭಕ್ತರಿಗೆ ಮೀಸಲಿಡಲಾಗಿದೆ.
ಅನ್ಯ ಕಾರ್ಯದ ನಿಮಿತ್ತ ಚಿಕ್ಕಮಗಳೂರಿಗೆ ಬರುವವರು ಕಡ್ಡಾಯವಾಗಿ ಕಡೂರು ಮಾರ್ಗದಲ್ಲಿ ಬರುವಂತೆ ಸೂಚನೆ ನೀಡಲಾಗಿದೆ.
ಭಕ್ತರಿಗೆ ವರ್ಷಕ್ಕೊಮ್ಮೆ ದರ್ಶನ ನೀಡುವ ಬೆಟ್ಟದ ಮೇಲಿರೋ ಬಿಂಡಿಗ ದೇವೀರಮ್ಮ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು