ಇತ್ತೀಚಿನ ಸುದ್ದಿ
Chikkamagaluru | ಕಾಫಿನಾಡು: 2 ಪ್ರತ್ಯೇಕ ಬಸ್ ಅಪಘಾತದಲ್ಲಿ ಓರ್ವ ಸಾವು: ಇನ್ನೊರ್ವ ಗಂಭೀರ ಗಾಯ
13/06/2025, 18:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ನಡೆದ ಎರಡು ಪ್ರತ್ಯೇಕ ಸರ್ಕಾರಿ ಬಸ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡಿದ್ದಾರೆ.
ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಎಪಿಎಂಸಿ ಕಡೆಗೆ ಹೋಗುತ್ತಿದ್ದ ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹುಸೇನ್ (23) ಎಂಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಘಟನೆಯಲ್ಲಿ
ಕೊಪ್ಪ ತಾಲೂಕಿನಿಂದ ತರೀಕೆರೆ ಹೋಗುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರಿಗೆ ಡಿಕ್ಕಿಯೊಡೆದ ಬಸ್ ನಂತರ ಲೈಟ್ ಕಂಬಕ್ಕೆ ಡಿಕ್ಕಿಯೊಡೆದಿದೆ.
ಬಸ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಲೈನ್ ಫ್ಯೂಸ್ ಕಟ್ ಆಗಿ ಭಾರೀ ಅನಾಹುತ ತಪ್ಪಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಡ ಗಾಯಗಳಾಗಿದ್ದು,
ಆಸ್ಪತ್ರೆಗೆ ದಾಖಲಿಸಲಾಗಿದೆ.