3:18 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ

22/12/2024, 11:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info reporterarnataka@gmail.com

ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಬಳಿಕ ಜಿಲ್ಲೆಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸ್ವಾಗತ ಕೋರಿದರು.
ಸಿ.ಟಿ.ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಹಿನ್ನಲೆಯಲ್ಲಿ ಬಂಧನಕ್ಕೊಳಗಾಗಿದ್ದರು.
ತಾಲೂಕಿನ ಮಾಗಡಿ ಹ್ಯಾಂಡ್ ಪೋಸ್ಟ್ ಬಳಿ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ ಸ್ವಾಗತ ಕೋರಿ ಕಾರ್ಯಕರ್ತರು
ಸಂಭ್ರಮಿಸಿದರು.ಅಲ್ಲಿಂದ ನೆರವಾಗಿ ವಾಹನಗಳ ಮೂಲಕ ಆಜಾದ್ ಪಾರ್ಕ್ ನಲ್ಲಿ ಜೆಸಿಬಿ ಮೂಲಕ‌ ಪುಷ್ಪಾರ್ಚನೆ ಮಾಡಿ ಜೈಕಾರ ಹಾಕಿ ಸಂಭ್ರಮಿಸಿದರು.
ನಂತರ ಆಜಾದ್ ಪಾರ್ಕ್ ಮೂಲಕ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಸಂಭ್ರಮಿಸಿದರು.

ಸಿ.ಟಿ.ರವಿ ಅವರ ಆಗಮನದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬೀಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಕಡೂರು, ತರೀಕೆರೆ, ಕೊಪ್ಪ, ನರಸಿಂಹರಾಜಪುರ ಸೇರಿದಂತೆ ವಿವಿಧ ಪೊಲೀಸ್ ಠಾಣೆಯ ಸಾವಿರಾರು ಪೊಲೀಸರನ್ನು ನಗರದಲ್ಲಿ ನಿಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು