2:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ನಾಮಪತ್ರ ಸಲ್ಲಿಕೆ: ಪಾದಯಾತ್ರೆಯುದ್ಧಕ್ಕೂ ಹಿರಿಯರ ಕಾಲಿಗೆ ನಮಸ್ಕಾರ

17/04/2023, 16:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ‌ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ಪತ್ನಿ ಪಲ್ಲವಿ, ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ವೆಂಕಟೇಶ್ ಜತೆಗಿದ್ದರು. ಚಿಕ್ಕಮಗಳೂರು ಚುನಾವಣಾ ಅಧಿಕಾರಿ ಕಿಶೋರ್ ಕುಮಾರ್ ಗೆ ರವಿ ನಾಮಪತ್ರ ಸಲ್ಲಿಸಿದರು.
3000ಕ್ಕೂ ಅಧಿಕ ಕಾರ್ಯಕರ್ತರ ಜೊತೆ ಶಾಸಕ ಸಿ.ಟಿ. ರವಿ ನಾಮಪತ್ರ ಸಲ್ಲಿಕೆಗೆ ತೆರಳಿದರು.
ನಾಮಪತ್ರ ಸಲ್ಲಿಕೆಯ ಮುನ್ನ ಕಾಮಧೇನು ಗಣಪತಿ ದೇವಸ್ಥಾನ ಹಾಗೂ ಸ್ವಗ್ರಾಮ ಚಿಕ್ಕಮಾಗವಳ್ಳಿ ಗ್ರಾಮದೇವತೆಗೆ ಪೂಜೆ ಸಲ್ಲಿಸಿದರು.
ರಸ್ತೆಯುದ್ಧಕ್ಕೂ ಸಿ.ಟಿ.ರವಿಗೆ ಹಾರ ಹಾಕಿ ಜನರು ಶುಭ ಕೋರಿದರು. ರಸ್ತೆಯುದ್ಧಕ್ಕೂ ಹಿರಿಯರ ಕಾಲಿಗೆ ಬಿದ್ದು ರವಿ ಆಶೀರ್ವಾದ ಪಡೆದರು.
ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಎಂದು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು