4:31 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Chikkamagaluru | ದತ್ತ ಜಯಂತಿ: ಕೊಟ್ಟಿಗೆಹಾರ, ಬಣಕಲ್ ಸಂಪೂರ್ಣ ಸ್ತಬ್ದ; ಅಂಗಡಿ ಮುಂಗಟ್ಟು ಬಂದ್

04/12/2025, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದತ್ತ ಜಯಂತಿ ಪ್ರಯುಕ್ತ ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ವಾಹನಗಳ ಸಂಚಾರ ಎಂದಿನಂತೆಯೇ ಇತ್ತು.

ಚಿಕ್ಕಮಗಳೂರು ದತ್ತ ಜಯಂತಿಗೆ 344ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಾಹನಗಳು ಕರಾವಳಿ ಭಾಗದಿಂದ ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದವು. ದತ್ತ ಪೀಠಕ್ಕೆ ಹೋಗುವ ವಾಹನಗಳಿಗೆ ಸೀರಿಯಲ್ ನಂಬರ್ ಹಾಕಿದ ಪತ್ರಗಳನ್ನು ಪೊಲೀಸರು ಅಂಟಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಎಲ್ಲೆಡೆಯು ಅಂಗಡಿ ಮುಂಗಟ್ಟು ಮುಚ್ಚಿದ್ದರಿಂದ ಶಾಂತಿಯುತವಾಗಿ ದತ್ತ ಜಯಂತಿ ಆಚರಿಸಲಾಯಿತು. ಪೊಲೀಸರು ದತ್ತ ಜಯಂತಿ ಮಾಲಾಧಾರಿಗಳು ಸಾಗುವ ಗಡಿ ಭಾಗದಲ್ಲಿ ಸೂಕ್ತ ಭದ್ರತೆ ಒದಗಿಸಿದ್ದರು. ಬಣಕಲ್, ಬಾಳೂರು ಹೊರ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳು ತಪಾಸಣೆಯ ಹೊಣೆ ಹೊತ್ತಿದ್ದರು.ಆಟೋ ರಿಕ್ಷಾ ಚಾಲಕರು ಬಾಡಿಗೆ ಇಲ್ಲದೇ ಪರದಾಡಿದರು. ಬಸ್ ಗಳಲ್ಲೂ ಜನ ಸಂಖ್ಯೆ ವಿರಳವಾಗಿತ್ತು. ಇಡೀ ಬಣಕಲ್ ಸುತ್ತಮುತ್ತ ವ್ಯಾಪಾರ ವ್ಯವಹಾರ ಸ್ಥಗಿತವಾಗಿತ್ತು. ಬಣಕಲ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಗಸ್ತು ತಿರುಗುತ್ತಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು