11:06 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ

16/10/2025, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ.
ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ ರೂಮಿನಲ್ಕಿ ರಕ್ತದ ಮಡುವಿನಲ್ಲಿ ಮಡದಿಯ ಶವ ಪತ್ತೆಯಾಗಿದೆ.
ರಮೇಶ್ ಎಂಬಾತ ತನ್ನ ಪತ್ನಿಯನ್ನು ಕ್ರೂರವಾಗಿ ಕೊಚ್ಚಿ ಕೊಂದಿರುವುದಾಗಿ ತಿಳಿದು ಬಂದಿದೆ. ಗಂಡನ ಜೊತೆ ಜಗಳವಾಗಿ 2 ವರ್ಷದಿಂದ ಪ್ರತ್ಯೇಕವಾಗಿ ತನು ವಾಸವಿದ್ದಳು. 7 ವರ್ಷದ ಹಿಂದೆ ಮದುವೆಯಾಗಿದ್ದು, 6 ವರ್ಷದ ಮಗನಿದ್ದಾನೆ. ರಮೇಶ್ ನಿನ್ನೆ ರಾತ್ರಿ ಕುಡಿದು ಬಂದು ಪತ್ನಿಯನ್ನ ಕ್ರೂರವಾಗಿ ಕೊಚ್ಚಿ ಕೊಂದಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು