12:13 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ: ಇಬ್ಬರು ಸ್ಥಳದಲ್ಲೇ ಸಾವು; ಸಂಬಂಧಿಕನಿಂದಲೇ ಕೃತ್ಯ?

20/02/2023, 14:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನ ಪ್ರಕಾಶ್(30) ಹಾಗೂ ಪ್ರವೀಣ್(33) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಸಾವನ್ನಪ್ಪಿದ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ ಗೆ ಬಂದೂಕು ಎಲ್ಲಿಂದ ಸಿಕ್ತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಅಥವಾ ಯಾವ ಬಂದೂಕು ಪರವಾನಗಿ ಇದೆಯಾ ಎಂಬೆಲ್ಲಾ ದೃಷ್ಠಿಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಹಾಡಹಗಲೇ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ. ಗುಂಡಿನದಾಳಿ ನಡೆಸಿದ ರಮೇಶ್ ನನ್ನ ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು