4:25 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ ಶರೀರ ಇಟ್ಟು ಪ್ರತಿಭಟನೆ

01/04/2025, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಲ ಮರು ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ
ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆನ್ನಲಾದ ತರೀಕೆರೆ ತಾಲೂಕಿನ

ಹುಣಸಘಟ್ಟ ಗ್ರಾಮದ ರೈತ ಮಂಜಾ ನಾಯ್ಕ್ (45) ಅವರ ಪಾರ್ಥಿವ ಶರೀರವನ್ನು ಬ್ಯಾಂಕ್ ಮುಂಭಾಗದಲ್ಲಿಟ್ಟು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಬ್ಯಾಂಕ್ ಮುಂದೆ ಆ್ಯಂಬ್ಯುಲೆನ್ಸ್ ನಿಲ್ಲಿಸಿ ಕುಟುಂಬಸ್ಥರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಬ್ಯಾಂಕ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಜ್ಜಂಪುರ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳಕ್ಕೆ ನಿನ್ನೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಜಾ ನಾಯ್ಕ್ ಅವರು ಯೂನಿಯನ್ ಬ್ಯಾಂಕಿನಲ್ಲಿ 4.70 ಲಕ್ಷ ಸಾಲ ಮಾಡಿದ್ದರು.
ಸಾಲ ಮರು ಪಾವತಿಗಾಗಿ ಬ್ಯಾಂಕ್ ಸಿಬ್ಬಂದಿಗಳು
ಸಾರ್ವಜನಿಕ ಪ್ರದೇಶದಲ್ಲಿ ಕಿರುಕುಳ ನೀಡಿದ್ದಾರೆ ಎಂದು
ಆರೋಪಿಸಲಾಗಿದೆ.
ಪೊಲೀಸರ ಮನವೊಲಿಕೆ ಬಳಿಕ ಗ್ರಾಮಸ್ಥರು ಬ್ಯಾಂಕ್ ಎದುರುಗಡೆಯಿಂದ ಮೃತದೇಹವನ್ನು ತೆರವುಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು