12:15 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

Chikkamagaluru | ಚಂದ್ರದ್ರೋಣ ಪರ್ವತಕ್ಕೆ ಪ್ರವಾಸ ಹೋಗಿದ್ದ ಬಾಲಕಿ ಮಿಸ್ಸಿಂಗ್: ತೀವ್ರ ಕಾರ್ಯಾಚರಣೆ ಶುರು

08/04/2026, 14:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಡಿಕೇರಿ ಬೆನ್ನಲ್ಲೆ ಕಾಫಿನಾಡಲ್ಲೂ ಪ್ರವಾಸಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾಳೆ.
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಿಗೂಢವಾಗಿ ಮಿಸ್ಸಿಂಗ್ ಆಗಿದ್ದಾಳೆ.
ಕೇರಳದ ಪಾಲಕ್ಕಾಡ್ ಮೂಲದ ನಂದನ ಎಂಬಾಕೆ ನಾಪತ್ತೆಯಾದ ಬಾಲಕಿ.
ಪ್ರವಾಸಕ್ಕೆಂದು ಕೇರಳದಿಂದ ಕಾಫಿನಾಡಿಗೆ ಆಗಮಿಸಿದ್ದ 40 ಜನರ ತಂಡದಲ್ಲಿ ಬಾಲಕಿ ಇದ್ದಳು. ಕುಟುಂಬ ಸದಸ್ಯರೊಂದಿಗೆ ನಂದನ ಆಗಮಿಸಿದ್ದಳು. ನಂದನ 10ನೇ ತರಗತಿ ಓದುತ್ತಿದ್ದಾಳೆ.
ಪರ್ವತದ ಸುಂದರ ತಾಣ ವೀಕ್ಷಿಸುವಾಗ ತಂಡದಿಂದ ಬೇರ್ಪಟ್ಟಿದ್ದಳು. ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು, ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ದಟ್ಟ ಅರಣ್ಯ ಹಾಗೂ ಕಡಿದಾದ ಬೆಟ್ಟ-ಗುಡ್ಡಗಳಲ್ಲಿ ತೀವ್ರ ಕಾರ್ಯಾಚರಣೆ ನಡೆಯುತ್ತಿದೆ.
ಮಂಜು ಮತ್ತು ಕತ್ತಲಿನ ವಾತಾವರಣದಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ.
ಪ್ರವಾಸಿಗರ ವಲಯದಲ್ಲಿ ನಿಗೂಢ ನಾಪತ್ತೆ ಪ್ರಕರಣ ಆತಂಕ ಮೂಡಿಸಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎಸ್ಪಿ ಜಯಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು