9:58 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Chikkamagaluru | ಜನಾಕ್ರೋಶಕ್ಕೆ ಬೆದರಿದ ಸರಕಾರ: ನಾಲ್ಕೇ ದಿನಗಳಲ್ಲಿ ಕಾಡಾನೆ ಸೆರೆಗೆ ಮತ್ತೆ ಕಾರ್ಯಾಚರಣೆ

04/08/2025, 12:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ.


ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಮಲೆನಾಡಿಗರ ತಾಳ್ಮೆಯ ಕಟ್ಟೆ ಒಡೆದಿತ್ತು. ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಂಗಮೇಶ್ವರಪೇಟೆ ಅರಣ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು. ಗಂಟೆಗಟ್ಟಲೇ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಜನರ ಆಕ್ರೋಶಕ್ಕೆ ಬೆದರಿದ ಸರ್ಕಾರ ಪ್ರತಿಭಟನೆ ನಡೆಯುತ್ತಿರುವಾಗಲೇ ಸ್ಥಳಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ 2 ಆನೆ ಸೆರೆ ಹಿಡಿಯುತ್ತೇವೆ ಎಂದಿದ್ರು. ಆದರೆ, ಕುಮ್ಕಿ ಆನೆಗಳು ಒಂದು ಪುಂಡಾನೆಯನ್ನ ಸೆರೆ ಹಿಡಿಯುತ್ತಿದ್ದಂತೆ ಕುಮ್ಕಿ ಆನೆಗಳು ಲಾರಿ ಹತ್ತಿದ್ವು. ಜನ ಹೇಳಿದ್ದು ಮೂರು ಆನೆ. ಸರ್ಕಾರದ ಹೇಳಿದ್ದು ಎರಡು ಆನೆ. ಆದರೆ, ಒಂದು ಆನೆ ಸೆರೆ ಹಿಡಿದು ಕುಮ್ಕಿ ಆನೆಗಳು ವಾಪಸ್ ಹೋಗಿದ್ದಕ್ಕೆ ಜನ ಮತ್ತೊಮ್ಮೆ ಹೋರಾಟದ ಬಗ್ಗೆ ಚಿಂತಿಸ ತೊಡಗಿದ್ದರು. ಇದರ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆ ಸೆರೆಗೆ ಮತ್ತೆ ಅನುಮತಿ ನೀಡಿರೋದ್ರಿಂದ ಬಿಡಾರಕ್ಕೆ ವಾಪಸ್ ಹೋಗಿದ್ದ ಕುಮ್ಕಿ ಆನೆಗಳು ಮತ್ತೆ ವಾಪಸ್ ಬಂದಿವೆ. ಇಂದಿನಿಂದ ಮೂವರನ್ನ ಎನ್.ಆರ್.ಪುರದ ಮುತ್ತಿನಕೊಪ್ಪ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಒಮ್ಮೆ ಕುಮ್ಕಿ ಆನೆಗಳನ್ನ ತಂದು-ತಗೆದುಕೊಂಡು ಹೋಗಲು ಲಕ್ಷಾಂತರ ಖರ್ಚು ಬರುತ್ತೆ. ಅಧಿಕಾರಿಗಳು-ಸರ್ಕಾರ 3-4 ದಿನಕ್ಕೆ ಆನೆಗಳನ್ನ ಸಾಗಾಟ ಮಾಡ್ತಿರೋದು ಸರ್ಕಾರದ ಬೊಕ್ಕಸಕ್ಕೆ ನಷ್ಟವಲ್ಲವೇ ಎಂದು ಜನ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು