8:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಸರಕಾರದ ಗ್ಯಾರಂಟಿಗಳಿಗೆ ಫೇಕ್ ಸರ್ಟಿಫಿಕೇಟ್ ಗಳಿಂದ ಸಮರ್ಥನೆ: ಸಿ.ಟಿ. ರವಿ ಆರೋಪ

18/10/2025, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರದ ಗ್ಯಾರಂಟಿ ಗಳಿಗೆ ಫೇಕ್ ಸರ್ಟಿಫಿಕೇಟ್ ಗಳಿಂದ ಸಮರ್ಥನೆ ಮಾಡ ಹೊರಟಿದೆ.
ಟ್ರಾನ್ಸ್ ಪೋರ್ಟ್ ಡಿಪಾರ್ಟ್ ಮೆಂಟ್ ಲಂಡನ್ ಬುಕ್ ಆಫ್ ರೆಕಾರ್ಡ್ ಹೆಸರಿನಲ್ಲಿ ಫೇಕ್ ಸರ್ಟಿಫಿಕೇಟ್ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.
ಲಂಡನ್ ಬುಕ್ ಆಫ್ ರೆಕಾರ್ಡ್ ನ ಪ್ಲಾಟಿನಮ್ ಸರ್ಟಿಫಿಕೇಟ್ ಸಿಕ್ಕಿದೆ ಅಂತಾರೆ. ಹೆಸರು ಲಂಡನ್‌ ಅಂತಿದೆ, ಹೆಡ್ ಆಫೀಸ್ ಕ್ರುಯೇಶಿಯಾ ತೋರಿಸ್ತಿದೆ ಎಂದು ರಾಜ್ಯ
ಸರ್ಕಾರದ ವಿರುದ್ಧ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ವ್ಯಂಗ್ಯವಾಡಿದರು.
5 ಸಾವಿರಕ್ಕೆ ಗೋಲ್ಡನ್, 6ಕ್ಕೆ ಡೈಮಂಡ್, 8ಕ್ಕೆ ಮತ್ತೊಂದು, 10 ಸಾವಿರ ಕೊಟ್ರೆ ಪ್ಲಾಟಿನಮ್ ಸರ್ಟಿಫಿಕೇಟ್ ಸಿಗುತ್ತೆ ಎಂದು ರವಿ ಟೀಕಿಸಿದ್ದಾರೆ.
ಜನ ಹಿಡಿ ಶಾಪ ಹಾಕುತ್ತಿದ್ದಾರೆ, ಇವ್ರು ಫೇಕ್ ಸರ್ಟಿಫಿಕೇಟ್ ಮೂಲಕ ಗುಲಾಮಗಿರಿಯ ಸಂಭ್ರಮದಲ್ಲಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನ ನಿಮಗೆ ಸರ್ಟಿಫಿಕೇಟ್ ಕೊಡಬೇಕು, ಚುನಾವಣೆ ಬಂದಾಗ ನಿಮ್ಮ ಹಣೆಬರಹ ಗೊತ್ತಾಗುತ್ತೆ. ಬೆಲೆಯೇರಿಕೆ, ಕೆಟ್ಟ ಆಡಳಿತ, ಗ್ಯಾರಂಟಿ ಮೆಚ್ಚಿದ್ದಾರೋ ಇಲ್ವೋ ಎಲೆಕ್ಷನ್ ಬರಲಿ ಗೊತ್ತಾಗುತ್ತೆ.
ನಿಮ್ಮ ಗ್ಯಾರೆಂಟಿ ಕೆಲಸ ಮಾಡಿದ್ರೆ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸೀಟು ನೀವೇ ಗೆಲ್ಲಬೇಕಿತ್ತು ಎಂದು ಅವರು ನುಡಿದರು.
ಲೋಕಸಭೆ ಚುನಾವಣೆಯ 29ರಲ್ಲಿ 9 ಗೆದ್ದು 19 ಕ್ಷೇತ್ರದಲ್ಲಿ ನೀವು ಸೋತಿದ್ದೀರಾ. ಲಂಡನ್ ಬುಕ್ ಆಫ್ ರೆಕಾರ್ಡ್ ಹೆಸರಲ್ಲಿ ಫೇಕ್ ಸರ್ಟಿಫಿಕೇಟ್ ಮಾಡಿದ್ದೀರಾ, ನಿಮಗೆ ಏನು ಹೇಳಬೇಕು. ನಿಮ್ಮ ಸರ್ಕಾರಕ್ಕೆ ನಾಚಿಕೆ-ಮಾನ- ಮರ್ಯಾದೆ ಏನೂ ಇಲ್ಲ, ಏನು ಹೇಳೋಣ.
ಯಾರಾದರೂ 10 ಸಾವಿರ ಕೊಟ್ಟು ಪ್ಲಾಟಿನಮ್ ಸರ್ಟಿಫಿಕೇಟ್ ತೆಗೆದುಕೊಳ್ಳಬಹುದು ಎಂದು
ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು