8:30 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ

24/01/2025, 23:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ.
ದಿಢೀರ್ ಪ್ರತಿಭಟನೆ, ಧರಣಿ, ಮುಷ್ಕರ, ‌ರಸ್ತೆ ತಡೆಯಿಂದ‌ ಜಿಲ್ಲಾಡಳಿತ ಹೈರಾಣು ಆಗಿರುವ ಹಿನ್ನೆಲೆಯಲ್ಲಿ
ಕಾನೂನು ಸುವ್ಯವಸ್ಥೆ ಪಾಲನೆಗೆ ಪ್ರತಿಭಟನೆ , ಮುಷ್ಕರ, ರಸ್ತೆ ತಡೆಗೆ ಬ್ರೇಕ್ ಹಾಕಲಾಗಿದೆ. ನಗರದ ಹೃದಯ ಭಾಗವಾದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ ಹೊರಡಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಬಡಾಮಖಾನ್ ದರ್ಗಾ‌ ಕೂಡ ಇರುವುರಿಂದ ಕಾನೂನು ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ನೀಡಲಾಗಿದೆ.
ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ 100 ಮೀಟರ್ ಯಾವುದೇ ಪ್ರತಿಭಟನೆ, ಧರಣಿ ನಡೆಸಿದಂತೆ ನಿರ್ಬಂಧಿಸಲಾಗಿದೆ. ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು