8:34 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ

24/01/2025, 23:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ.
ದಿಢೀರ್ ಪ್ರತಿಭಟನೆ, ಧರಣಿ, ಮುಷ್ಕರ, ‌ರಸ್ತೆ ತಡೆಯಿಂದ‌ ಜಿಲ್ಲಾಡಳಿತ ಹೈರಾಣು ಆಗಿರುವ ಹಿನ್ನೆಲೆಯಲ್ಲಿ
ಕಾನೂನು ಸುವ್ಯವಸ್ಥೆ ಪಾಲನೆಗೆ ಪ್ರತಿಭಟನೆ , ಮುಷ್ಕರ, ರಸ್ತೆ ತಡೆಗೆ ಬ್ರೇಕ್ ಹಾಕಲಾಗಿದೆ. ನಗರದ ಹೃದಯ ಭಾಗವಾದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ ಹೊರಡಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಬಡಾಮಖಾನ್ ದರ್ಗಾ‌ ಕೂಡ ಇರುವುರಿಂದ ಕಾನೂನು ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ನೀಡಲಾಗಿದೆ.
ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ 100 ಮೀಟರ್ ಯಾವುದೇ ಪ್ರತಿಭಟನೆ, ಧರಣಿ ನಡೆಸಿದಂತೆ ನಿರ್ಬಂಧಿಸಲಾಗಿದೆ. ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು