2:20 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ

24/01/2025, 23:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ.
ದಿಢೀರ್ ಪ್ರತಿಭಟನೆ, ಧರಣಿ, ಮುಷ್ಕರ, ‌ರಸ್ತೆ ತಡೆಯಿಂದ‌ ಜಿಲ್ಲಾಡಳಿತ ಹೈರಾಣು ಆಗಿರುವ ಹಿನ್ನೆಲೆಯಲ್ಲಿ
ಕಾನೂನು ಸುವ್ಯವಸ್ಥೆ ಪಾಲನೆಗೆ ಪ್ರತಿಭಟನೆ , ಮುಷ್ಕರ, ರಸ್ತೆ ತಡೆಗೆ ಬ್ರೇಕ್ ಹಾಕಲಾಗಿದೆ. ನಗರದ ಹೃದಯ ಭಾಗವಾದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ ಹೊರಡಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಬಡಾಮಖಾನ್ ದರ್ಗಾ‌ ಕೂಡ ಇರುವುರಿಂದ ಕಾನೂನು ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ನೀಡಲಾಗಿದೆ.
ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ 100 ಮೀಟರ್ ಯಾವುದೇ ಪ್ರತಿಭಟನೆ, ಧರಣಿ ನಡೆಸಿದಂತೆ ನಿರ್ಬಂಧಿಸಲಾಗಿದೆ. ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು