3:25 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Chikkamagaluru | ಸಾಲ ಮರು ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ?: ಮತ್ತೊಬ್ಬ ಅನ್ನದಾತ ಸಾವಿಗೆ ಶರಣು

01/04/2025, 11:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಸಾಲ ಬಾಧೆ ತಾಳಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತಪಟ್ಟವರನ್ನು ಮಂಜಾ ನಾಯ್ಕ್ (45) ಎಂದು ಗುರುತಿಸಲಾಗಿದೆ.
ಮಂಜಾ ನಾಯ್ಕ್ ಅವರು ಯೂನಿಯನ್ ಬ್ಯಾಂಕಿನಿಂದ 4.70 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟುವಂತೆ ಬ್ಯಾಂಕ್ ನವರು ಲಾಯರ್ ನೋಟೀಸ್ ಕಳುಹಿಸಿದ್ದರು. ಈ ಮಧ್ಯೆ ಬ್ಯಾಂಕಿನ ವ್ಯವಸ್ಥಾಪಕ ಕಿರಣ್ ಹಾಗೂ ಗುಮಾಸ್ತ ಪಿರೋಜಿ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದರು. ಬ್ಯಾಂಕ್ ಸಿಬ್ಬಂದಿಗಳು ಸಾರ್ವಜನಿಕ ಪ್ರದೇಶದಲ್ಲಿ ಮಂಜಾ ನಾಯ್ಕ್ ಅವರನ್ನು ನಿಲ್ಲಿಸಿ ನಿಂದಿಸುತ್ತಿದ್ದರು.
ಮಂಜಾ ನಾಯ್ಕ್ ಅವರು ಅವಮಾನ ತಾಳಲಾರದೆ,
ಮರ್ಯಾದೆಗೆ ಅಂಜಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ಮಂಜಾ ನಾಯ್ಕ್ ಅವರು ಕೊನೆಯಿಸಿರೆಳೆದಿದ್ದಾರೆ.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು