8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಭಾರೀ ಮಳೆ, ಮಂಜು: ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್; 1 ತಿಂಗಳು ನಿರ್ಬಂಧ

01/07/2025, 11:27

ಚಿಕ್ಕಮಗಳೂರು(reporterkarnataka.com): ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಕಲಾಗಿದೆ.


ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಚಾರಣಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದೆ. 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯವನ್ನು ಪ್ರವಾಸಿಗರು ಸವಿಯುತ್ತಿದ್ದರು. ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯವಾಗಿದೆ. ಯಾವುದೇ ವಾಹನಗಳು ಹೋಗಲು ಆಗುವುದಿಲ್ಲ. ಹೊತ್ತೇ ತರಬೇಕಾದ ಪರಿಸ್ಥಿತಿ ಇದೆ.
ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶದವಾದ್ದರಿಂದ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಲಿದೆ.
ಎತ್ತಿನಭುಜದಲ್ಲಿ ಓರ್ವ ಕಾವಲುಗಾರನ ನೇಮಿಸಲು ಸೂಚಿಸಲಾಗಿದೆ. ಚಾರಣವನ್ನ ಬಂದ್ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು