ಇತ್ತೀಚಿನ ಸುದ್ದಿ
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ
25/08/2026, 19:18
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು-ಮೂಡಿಗೆರೆ ತಾಲೂಕಿನ ನೂರಾರು ಮಂದಿ ಬಿಜೆಪಿ-ಭಜರಂಗದಳ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಮುಖಂಡ ವಿಜಯ್ ಕುಮಾರ್ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿದೆ.
ಇನ್ನೂ 200ಕ್ಕೂ ಅಧಿಕ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರಲಿದ್ದಾರೆ.
2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯ್ ಕುಮಾರ್ ಜೆಡಿಎಸ್ ಗೆ ಸೇರಿದ್ದಾರೆ.
ಕಟ್ಟರ್ ಹಿಂದೂವಾದಿ, ಭಜರಂಗದಳ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಕೂಡ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ತೆಕ್ಕೆಗೆ ಸೇರಿದ್ದಾರೆ.
ಬಿಜೆಪಿ ಯುವ ಮೋರ್ಚಾದ ಮಂಡಲ ಹಾಗೂ ವಿವಿಧ ಹಂತದ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ನಾಳೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕೈ-ಕಮಲ ತೊರೆದು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.ಮಾಜಿ ಸಿಎಂ ಕುಮಾರಸ್ವಾಮಿ, ನಿಖಿಲ್, ಭೋಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಸೇರಲಿದ್ದಾರೆ.
ನಾಳೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ 500ಕ್ಕೂ ಅಧಿಕ ಕಾರ್ಯಕರ್ತರು ತೆರಳಿದ್ದಾರೆ. 200ಕ್ಕೆ ಅಧಿಕ ಕಾರ್ಯಕರ್ತರು ಜೆಡಿಎಸ್ ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ ಸೇರಲಿದ್ದಾರೆ.












