12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಗಾಳಿ ಮಳೆ: ಓಮ್ನಿ ಮೇಲೆ ಬಿದ್ದ ಮರ; ಶೃಂಗೇರಿ ರಸ್ತೆ ಬಂದ್

23/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka e-mail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಜಯಪುರ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ಶೃಂಗೇರಿ ಸಮೀಪ ನಿಂತಿದ್ದ ಓಮ್ನಿ ಕಾರಿಗೆ ಮರ ಬಿದ್ದು ಹಾನಿಗೀಡಾಗಿದೆ.
ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರೀ ಮಳೆಯಾಗಿದ್ದು, ಗುಡುಗು-ಸಿಡಿಲ ಮಳೆ ಕಂಡು ಜನರು ಭಯಭೀತರಾಗಿದ್ದಾರೆ. ಶೃಂಗೇರಿಯಲ್ಲಿ ಕೂಡ ಅಬ್ಬರದ ಗಾಳಿ ಮಳೆ ಸುರಿದಿದೆ.
ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ಹಾನಿಗೀಡಾಗಿದೆ. ತೋಟಕ್ಕೆ ಜನರನ್ನ ಕರೆದೊಯ್ಯುವ ಓಮ್ನಿ ಕಾರು ಇದಾಗಿದೆ.


ಮಧ್ಯಾಹ್ನ ಊಟಕ್ಕೆ ಬಂದಿದ್ದರಿಂದ ಕಾರಿನಲ್ಲಿ ಯಾರೂ ಇರಲಿಲ್ಲ. ಕಾರಿನ ಮೇಲೆ ಮರ ಬಿದ್ದಿದ್ದರಿಂದ ಶೃಂಗೇರಿ-ಚಿಕ್ಕಮಗಳೂರು ರಸ್ತೆ ಕೆಲ ಬಂದ್ ಆಗಿದೆ. ಕಾರಿನಲ್ಲಿ ಜನ ಇದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಕಟ್ಟಡ ಗುತ್ತಿಗೆದಾರ ಪ್ರದೀಪ್ ಎಂಬುವರಿಗೆ ಸೇರಿದ ಕಾರು ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು